ಪ್ರಶ್ನೆ ಕೇಳುವುದು
ದೆಹಲಿ ಮೂಲದ ಸರ್ಕಾರೇತರ ಸಂಶೋಧನಾ ಸಂಸ್ಥೆಯಾದ ಪಿಆರ್ಎಸ್ ಲೆಜಿಸ್ಲೇಟಿವ್ ರಿಸರ್ಚ್ ಫೆಬ್ರವರಿ 13, 2026 ರವರೆಗೆ ಸಂಗ್ರಹಿಸಿದ ಮಾಹಿತಿಯ ಪ್ರಕಾರ ಮತ್ತು ರಾಜ್ಯಸಭೆಯ ದಾಖಲೆಗಳು ಒದಗಿಸಿದ ದತ್ತಾಂಶದ ಪ್ರಕಾರ, ರಾಷ್ಟ್ರಪತಿಗಳಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ರಾಜ್ಯಸಭಾ ಸದಸ್ಯರೊಬ್ಬರು ತಮ್ಮ ಆರು ವರ್ಷಗಳ ಅವಧಿಯಲ್ಲಿ ಮೇಲ್ಮನೆಯಲ್ಲಿ ಒಂದೇ ಒಂದು ಪ್ರಶ್ನೆಯನ್ನು ಕೇಳಿಲ್ಲ ಅಥವಾ ಯಾವುದೇ ಖಾಸಗಿ ಸದಸ್ಯರ ಮಸೂದೆಯನ್ನು ಪರಿಚಯಿಸಿಲ್ಲ, ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ಸಂಸದರು ಮಾಡುವ ಯಾವುದೇ 'ವಿಶೇಷ ಉಲ್ಲೇಖ'ಗಳು ಅವರ ಖಾತೆಯಲ್ಲಿ ಇಲ್ಲ ಎಂಬ ಪತ್ರಿಕಾ ವರದಿಯನ್ನು ತಾವೂ ಓದಿರಬಹುದು. ರಾಷ್ಟ್ರಪತಿಗಳಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಸದಸ್ಯರು ತಮ್ಮ ವಿದ್ವತ್ತು, ಕಾರ್ಯಕ್ಷೇತ್ರ ಪರಿಣತಿಯ ವಿವಿಧ ದೃಷ್ಟಿಕೋನಗಳು ಮತ್ತು ಅನುಭವಗಳ ಮೂಲಕ ರಾಜ್ಯಸಭೆಯ ಚರ್ಚೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ಚರ್ಚೆಗಳ ಗುಣಮಟ್ಟವನ್ನು ಹೆಚ್ಚಿಸಬಹುದು. ಹೀಗಿರುವಾಗ ಆ ರಾಜ್ಯ ಸಭೆಯ ನಾಮ ನಿರ್ದೇಶನ ಸದಸ್ಯರು ಯಾವ ಚರ್ಚೆಯಲ್ಲಿಯೂ ಭಾಗವಹಿಸದೇ, ತಮ್ಮ ಅನಿಸಿಕೆ ಅಭಿಪ್ರಾಯ/ಸಲಹೆಗಳನ್ನು ನೀಡದೇ, ಆರು ವರ್ಷಗಳಲ್ಲಿ ಒಂದೇ ಒಂದು ಪ್ರಶ್ನೆಯನ್ನೂ ಕೇಳದೇ ಏನು ಕೊಡುಗೆ ಕೊಟ್ಟರು ಅಥವಾ ಕೊಡುಗೆ ಪಡೆದರು ಎಂಬುದನ್ನು ಆ ಭಗವಂತನೇ ಬಲ್ಲ. ಯಾಕೆಂದರೆ, ನಮ್ಮಲ್ಲಿ ಲೋಕಸಭೆಯಲ್ಲಿ ಪ್ರಶ್ನೆ ಕೇಳಲೂ ಹಣ ಪಡೆದ ಉದಾಹರಣೆಗಳೂ ಇವೆ.ಇರಲಿ, ಆ ಕೊಳಕು ರಾಜ...